ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾಗಿದ್ದ ಡಿ.ವಿ.ಸದಾನಂದ ಗೌಡ ಅವರು ಅನಿರೀಕ್ಷಿತ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ, ಅವರ ರಾಜೀನಾಮೆಯಿಂದಾಗಿ ತೆರವಾದ ಲೋಕಸಭಾ ಕ್ಷೇತ್ರಕ್ಕೆ ಮಾ.18 ರಂದು ಚುನಾವಣೆ ನಡೆದು, ಮಾ.21 ರಂದು ಮತ ಎಣಿಕೆಯಾಗಿ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ನ ಜಯಪ್ರಕಾಸ್ ಹೆಗ್ಡೆಯವರು ಬಿಜೆಪಿಯ ಸುನಿಲ್ ಕುಮಾರ್ ಅವರನ್ನು 45, 724 ಮತಗಳ ಭಾರೀ ಅಂತರದಿಂದ ಸೋಲಿಸುವ ಮೂಲಕ ಜಯದ ಪ್ರಕಾಶ ಮೂಡಿಸಿದ್ದಾರೆ.
ಕಾಂಗ್ರೆಸ್ ನಾಯಕರು ಹೈಕಮಾಂಡ್ ನ ಕಟ್ಟುನಿಟ್ಟಿನ ಾದೇಶ ಮತ್ತು ಎಚ್ಚರಿಕೆಯಿಂದಾಗಿ ಐಕ್ಯತೆಯಿಂದ ಕೆಲಸ ಮಾಡಿದ್ದು ಮತ್ತು ರಾಜ್ಯದ ಬಿಜೆಪಿ ಸರಕಾರದ ವಿಫಲತೆ, ದುರಾಡಳಿತ, ಹಗರಣಗಳ ಸರಮಾಲೆ, ಬಿಜೆಪಿ ಪಕ್ಷದೊಳಗಿನ ಗೊಂದಲ, ಭಿನ್ನಮತ, ಒಡಕು ಇತ್ಯಾದಿಗಳೆಲ್ಲವೂ ಕಾಂಗ್ರೆಸ್ ನ ಗೆಲುವು ಮತ್ತು ಬಿಜೆಪಿ ಸೋಲಿಗೆ ಕಾರಣವಾಯಿತು.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಇವುಗಳಲ್ಲಿ 4 ಉಡುಪಿ ಜಿಲ್ಲೆಯಲ್ಲಿ ಮತ್ತು 4 ಚಿಕ್ಕಮಗಳೂರು ಜಿಲ್ಲೆಯಲ್ಲಿ ಇವೆ. ಚಿಕ್ಕಮಗಳೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾತ್ರ ಬಿಜೆಪಿಯ ಸುನಿಲ್ ಕುಮಾರ್ ಕಾಂಗ್ರೆಸ್ ನ ಜಯಪ್ರಕಾಸ್ ಹೆಗ್ಡೆಯವರಿಗಿಂತ ಅಧಿಕ ಮತ ಪಡೆದಿದ್ದಾರೆ. ಉಳಿದಂತೆ ಶೃಂಗೇರಿ, ಮೂಡಿಗೆರೆ ಮತ್ತು ತರಿಕೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಸ್ತುತ ಬಿಜೆಪಿಯವರೇ ಶಾಸಕರಾಗಿದ್ದಾಗಲೂ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆಯವರು ಬಿಜೆಪಿ ಅಭ್ಯರ್ಥಿಗಿಂತ ಅಧಿಕ ಮತ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಕಳದಲ್ಲಿ ಮಾತ್ರ ಕಾಂಗ್ರೆಸ್ ನ ಗೋಪಾಲ ಭಂಡಾರಿಯವರು ಶಾಸಕರಾಗಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿಗಿಂತ ಹೆಚ್ಚು ಮತ ಪಡೆದಿದ್ದಾರೆ. ಉಳಿದಂತೆ ಬಿಜೆಪಿಯವರೇ ಶಾಸಕರಾಗಿರುವ ಕುಂದಾಪುರ, ಕಾಪು ಮತ್ತು ಉಡುಪಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಿಂತ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿರುವುದು ಬಿಜೆಪಿಯ ಎದೆಯಲ್ಲಿ ನಡುಕ ಹುಟ್ಟಿಸಿದೆಯಾದರೆ, ಕಾಂಗ್ರೆಸ್ ನಾಯಕರ ಮನದಲ್ಲಿ ಹೊಸ ಕನಸು ಚಿಗುರಿಸಿದೆ. ಇದು ಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುವ ಸಾಧ್ಯತೆಯೂ ಇಲ್ಲದಿಲ್ಲ.
- jayaprakash hegde
- jayada sambhramadalli
- mediya mutthige
- matha yenike kendradinda hegdeyavarannu yetthikondu horage baruttiro karyakartaru
- hegde vijayotsava
- hegde vijayotsava 1
- hegde vijayotsava 2
- jayapraksh hegde vijayotsava1
- matha yenike kendrada horage kuthuhaligara dandu
- vijayotsava
- vijayotsava 1
- appana jayakke magalu divya sambhrama
- appana jayakke makkalaada nishanth divya sambhrama
- congress bhavanadalli vijayotsava
- congress bhavanadalli vijayotsava1
- jayada sambhramavannu hanchikollutthiruva vasanth salyan















