ಕಾಂಗ್ರೆಸ್ ನಡೆಸಿದ ಅಪಪ್ರಚಾರ ಪ್ರಜಾಪ್ರಭುತ್ ವಕ್ಕೆ ಪೂರಕವಲ್ಲ: ಮಹೇಂದ್ರ ಕುಮಾರ್

Posted: March 26, 2012 in Uncategorized
Tags: , , , , , , , , , , , , , , , , , ,

ಉಡುಪಿ: ರಾಜ್ಯದ ಬಿಜೆಪಿ ಸರಕಾರದ ದುರಾಚಾರದಿಂದ ಬೇಸತ್ತ ಮತದಾರ ಒಗ್ಗಟ್ಟಿನಿಂದ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಗೆ ಮತ ನೀಡಿದ್ದಾನೆ. ಮತದಾರ ನೀಡಿದ ತೀರ್ಪಿನ್ನು ಸ್ವಾಗತಿಸುತ್ತೇವೆ. ಆದರೆ, ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಜೆಡಿಎಸ್ ವಿರುದ್ದ ಬಹಳಷ್ಟು ಅಪಪ್ರಚಾರ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಪೂರಕವಾದ ಬೆಳವಣಿಗೆಯಲ್ಲ ಎಂದು ಜೆಡಿಎಸ್ ರಾಜ್ಯ ನಾಯಕ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.
ಉಡುಪಿಯ ಖಾಸಗಿ ಹೋಟೇಲೊಂದರಲ್ಲಿ ಮಾ.26 ರಂದು ನಡೆಸಿದ ಮಾದ್ಯಮಗೋಷ್ಟಿಯಲ್ಲಿ ಅವರು ಮಾತನಾಡುತ್ತಿದ್ದರು. ಈ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಲ್ಲ. ರಾಜ್ಯದಲ್ಲಿ ಉತ್ತರ ಪ್ರದೇಶದ ಚುನಾವಣಾ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ಹೇಳಿದ ಮಹೇಂದ್ರ ಅವರು, ಜೆಡಿಎಸ್ ನ ಸೋಲಿಗೆ ಯಾರೂ ಹೊಣೆಯಲ್ಲ. ಸೋಲಿನ ಬಗ್ಗೆ ಅವಲೋಕನ ಮಾಡಿಕೊಂಡು ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಸಂಘಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮಹಾ ಪ್ರಧಾನ ಕಾರ್ಯದರ್ಶಿ ಲೂಯಿಸ್ ಲೋಬೋ, ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಕೆಂಚನೂರು ಶಾಲಿನಿ ಶೆಟ್ಟಿ, ಯುವ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ದಿಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಹಾಗೂ ರಿಝ್ವಾನ್ ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s