ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆದ ಮತದಾನದ ದಿನವಾದ ಇಂದು ಮತ್ತು ನಿನ್ನೆ ಸಹ ಮಣಿಪಾಲದಿಂದ ಪ್ರಕಟವಾಗುವ ಪ್ರತಿಷ್ಟಿತ ‘ಉದಯವಾಣಿ’ ದಿನಪತ್ರಿಕೆಯು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ಕಾಸಿಗಾಗಿ ಸುದ್ದಿ ಪ್ರಕಟಿಸಿ ಪತ್ರಿಕಾಧರ್ಮಕ್ಕೆ ಅಪಚಾರವೆಸಗಿದೆ.
ಮಾ.18 ರ ಉದಯವಾಣಿಯ ಪುಟ 12 ರಲ್ಲಿ ‘ಸುನಿಲ್ ಕುಮಾರ್ ಗೆ ಎಲ್ಲೆಡೆ ಭಾರೀ ಬೆಂಬಲ’ ಎಂಬ ಸುದ್ದಿಯನ್ನು ಪ್ರಕಟಿಸಿದೆ. ಈ ಸುದ್ದಿ ಕಾಸು ಪಡೆದುಕೊಂಡು ಪ್ರಕಟಿಸಿದ ಸುದ್ದಿ ಎನ್ನುವುದನ್ನು ಯಾರು ಬೇಕಾದರೂ ಹೇಳಬಹುದು.
ಮಾ.17 ರ ಉದಯವಾಣಿಯಲ್ಲಿ ಕಾಂಗ್ರೆಸ್ ನಿಂದ ಕಾಸು ಪಡೆದುಕೊಂಡು ಪ್ರಕಟಿಸಿದ ಎರಡು ಸುದ್ದಿಗಳಿವೆ. ಒಂದು, ‘ಜಯಪ್ರಕಾಸ್ ಹೆಗ್ಡೆ ಪರ ಜನಬೆಂಬಲದ ಮಹಾಪೂರ’, ಇನ್ನೊಂದು, ‘ಕಾಂಗ್ರೆಸ್ ಸರಕಾರದ ಅಭಿವೃದ್ದಿ ಕಾರ್ಯಕ್ರಮ ನಮಗೆ ಶ್ರೀರಕ್ಷೆ. – ಆಸ್ಕರ್ ಫೆರ್ನಾಂಡಿಸ್’.
ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ಗೆಲುವಿಗಾಗಿ, ಅಧಿಕಾರಕ್ಕಾಗಿ ಅನೈತಿಕ ಮಾರ್ಗ ಹಿಡಿದಿದೆ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ? ಈ ಎರಡೂ ರಾಜಕೀಯ ಪಕ್ಷಗಳು ದಿನ ಪತ್ರಿಕೆಗಳಿಗೆ ಮತ್ತು ವಾರ ಪತ್ರಿಕೆಗಳಿಗೆ ಹಾಗೂ ಸ್ಥಳೀಯ ಕೆಲವು ಖಾಸಗಿ ಟಿವಿ ಛಾನೆಲ್ ಗಳಿಗೆ ಅನಧಿಕೃತವಾಗಿ ವಿತರಿಸಿದ ಹಣ ಕೆಲವು ಲಕ್ಷಗಳು. ಈ ಬಗ್ಗೆ ಚುನಾವಣಾ ಆಯೋಗ ಸುಮೋಟೋ ಪ್ರಕರಣ ದಾಖಲಿಸಿ ತನಿಖೆ ನಡೆಸುವ ದಿಟ್ಟತನ ಪ್ರದರ್ಶಿಸಬೇಕೆಂದು www.udupibits.com ಒತ್ತಾಯಿಸಿದೆ.
- bjp kaasigaagi suddi
- congress kaasigaagi suddi 1
- congress kaasigaagi suddi








