Posts Tagged ‘tarikere’

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಮರು ಚುನಾವಣೆಯ ಪ್ರಚಾರ ಕಾರ್ಯಕ್ರಮ ನಡೆಯುತ್ತಿರುವಂತೆಯೇ ಮಣಿಪಾಲದಿಂದ ಪ್ರಕಟವಾಗುತ್ತಿರುವ ‘ಉದಯವಾಣಿ’ ದಿನ ಪತ್ರಿಕೆಯು ಮೂರನೇ ದಿನವಾದ ಇಂದೂ (ಮಾ.14) ಸಹ ಕಾಸಿಗಾಗಿ ಸುದ್ದಿ ಪ್ರಕಟಿಸಿದೆ.
ಮಾ.14 ರ ುದಯವಾಣಿಯ 12 ನೇ ಪುಟದಲ್ಲಿ ‘ಮೀನುಗಾರರಿಗೆ ರಾಜ್ಯ ಸರಕಾರದ ಬಂಪರ್ ಕೊಡುಗೆ’ ಎಂಬ ಶಿರ್ಷಿಕೆಯಡಿಯಲ್ಲಿ ಬಿಜೆಪಿ ಪರವಾದ ವಿಶೇಷ ಬರಹವನ್ನು ಪ್ರಕಟಿಸಿ ಪತ್ರಿಕಾರಂಗಕ್ಕೆ ಕಳಂಕ ಹಚ್ಚಿದೆ. ಈ ಬರಹದೊಂದಿಗೆ ಮೀನುಗಾರಿಕಾ ನಿಗಮದ ಅಧ್ಯಕ್ಷರ ಹಾಗೂ ಮೀನುಗಾರಿಕಾ ಫಡರೇಶನಿನ ಅಧ್ಯಕ್ಷರ ಅಭಿಪ್ರಾಯಗಳನ್ನೂ ಪ್ರಕಟಿಸಿದೆ. ಇವರಿಬ್ಬರೂ ಬಿಜೆಪಿ ನಾಯಕರೂ ಹೌದು.
ಕಳೆದ ಮೂರ್ನಾಲ್ಕು ದಿನಗಳಿಂದ ಉದಯವಾಣಿಯ 12 ನೇ ಪುಟದಲ್ಲಿ ಪ್ರತಿದಿನವೂ ಬಿಜೆಪಿ ಪರವಾದ ವಿಶೇಷ ಲೇಖನಗಳು ಪ್ರಕಟವಾಗುತ್ತಿದ್ದು, ಇವುಗಳನ್ನು ಸಂಬಂಧಪಟ್ಟವರಿಂದ ಹಣ ಪಡೆದುಕೊಂಡು ಜಾಹೀರಾತಿನ ಬದಲಾಗಿ ಲೇಖನದ ರೂಪದಲ್ಲಿ ಉದಯವಾಣಿ ಪ್ರಕಟಿಸುತ್ತಿದೆ.
ಬಿಜೆಪಿ ಮತ್ತು ಉದಯವಾಣಿ ಈ ಮೂಲಕ ಚುನಾವಣಾ ಆಯೋಗ, ಚುನಾವಣಾ ವೀಕ್ಷಕರು, ಸರಕಾರವನ್ನು ವಂಚಿಸುತ್ತಿದೆ. ಚುನಾವಣಾಧಿಕಾರಿಗಳು, ಚುನಾವಣಾ ವೀಕ್ಷಕರು ಮತ್ತು ಕಾಂಗ್ರೆಸ್ ನಾಯಕರಾಗಲೀ, ಜೆಡಿಎಸ್ ನಾಯಕರಾಗಲೀ ಕಾಸಿಗಾಗಿ ಸುದ್ದಿಯ ವಿರುದ್ದ ಸಂಬಂಧಪಟ್ಟವರಿಗೆ ಇನ್ನೂ ಸಹ ದೂರು ನೀಡದೇ ಇರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.